22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಮಾಜಮುಖಿ ಚಿಂತನೆ ಹಾಗೂ ಕಾರ್ಯವೈಖರಿಗೆ ರಾಜ್ಯವ್ಯಾಪ್ತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು ಬಳ್ಳಾರಿಯ ಅಭಿಮಾನಿಯಿಂದ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಬೃಹತ್ ಗಾತ್ರದ ಭಾವಚಿತ್ರ ತಯಾರಿಸಿ ಹಸ್ತಾಂತರಿಸಿದರು.

ತಾಲೂಕಿಗೆ ಅಪ್ಪಲಿಸಿದ ನೆರೆ ಪ್ರವಾಹದಲ್ಲಿ ಮಾಡಿದ ಕೆಲಸಗಳು, ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಆಸರೆಯಾದ ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿ, ಮೆಚ್ಚಿ ತಂಡದ ಸಂಚಾಲಕ, ಲಕ್ಷ್ಮಿ ಗ್ರೂಪ್ಸ್ ಕನಸಿನ ಮನೆ ಇದರ ಮಾಲಕ ಮೋಹನ್ ಕುಮಾರ್ ಅವರ ಭಾವಚಿತ್ರ ತಯಾರಿಸಿ ಬಳ್ಳಾರಿಯ ಅಭಿಯಾನಿ ಗುರುರಾಜ್ ಎಂಬವರು ಬಳ್ಳಾರಿಯಿಂದ ಉಜಿರೆಗೆ ಬಸ್ ಮುಖಾಂತರ ಆಗಮಿಸಿ ಮೋಹನ್ ಕುಮಾರ್ ಅವರನ್ನು ಭೇಟಿ ಮಾಡಿ ಎರಡು ಬೃಹತ್ ಗಾತ್ರದ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದರು.

ಈ ಸಂದರ್ಭ ಮೋಹನ್ ಕುಮಾರ್ ಅವರು ಬಳ್ಳಾರಿಯ ಅಭಿಮಾನಿಗೆ ಧನ್ಯವಾದ ಅರ್ಪಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!