24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಮಾಜಮುಖಿ ಚಿಂತನೆ ಹಾಗೂ ಕಾರ್ಯವೈಖರಿಗೆ ರಾಜ್ಯವ್ಯಾಪ್ತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು ಬಳ್ಳಾರಿಯ ಅಭಿಮಾನಿಯಿಂದ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಬೃಹತ್ ಗಾತ್ರದ ಭಾವಚಿತ್ರ ತಯಾರಿಸಿ ಹಸ್ತಾಂತರಿಸಿದರು.

ತಾಲೂಕಿಗೆ ಅಪ್ಪಲಿಸಿದ ನೆರೆ ಪ್ರವಾಹದಲ್ಲಿ ಮಾಡಿದ ಕೆಲಸಗಳು, ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಆಸರೆಯಾದ ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿ, ಮೆಚ್ಚಿ ತಂಡದ ಸಂಚಾಲಕ, ಲಕ್ಷ್ಮಿ ಗ್ರೂಪ್ಸ್ ಕನಸಿನ ಮನೆ ಇದರ ಮಾಲಕ ಮೋಹನ್ ಕುಮಾರ್ ಅವರ ಭಾವಚಿತ್ರ ತಯಾರಿಸಿ ಬಳ್ಳಾರಿಯ ಅಭಿಯಾನಿ ಗುರುರಾಜ್ ಎಂಬವರು ಬಳ್ಳಾರಿಯಿಂದ ಉಜಿರೆಗೆ ಬಸ್ ಮುಖಾಂತರ ಆಗಮಿಸಿ ಮೋಹನ್ ಕುಮಾರ್ ಅವರನ್ನು ಭೇಟಿ ಮಾಡಿ ಎರಡು ಬೃಹತ್ ಗಾತ್ರದ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದರು.

ಈ ಸಂದರ್ಭ ಮೋಹನ್ ಕುಮಾರ್ ಅವರು ಬಳ್ಳಾರಿಯ ಅಭಿಮಾನಿಗೆ ಧನ್ಯವಾದ ಅರ್ಪಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!