23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಮಾಜಮುಖಿ ಚಿಂತನೆ ಹಾಗೂ ಕಾರ್ಯವೈಖರಿಗೆ ರಾಜ್ಯವ್ಯಾಪ್ತಿಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು ಬಳ್ಳಾರಿಯ ಅಭಿಮಾನಿಯಿಂದ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಬೃಹತ್ ಗಾತ್ರದ ಭಾವಚಿತ್ರ ತಯಾರಿಸಿ ಹಸ್ತಾಂತರಿಸಿದರು.

ತಾಲೂಕಿಗೆ ಅಪ್ಪಲಿಸಿದ ನೆರೆ ಪ್ರವಾಹದಲ್ಲಿ ಮಾಡಿದ ಕೆಲಸಗಳು, ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಆಸರೆಯಾದ ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿ, ಮೆಚ್ಚಿ ತಂಡದ ಸಂಚಾಲಕ, ಲಕ್ಷ್ಮಿ ಗ್ರೂಪ್ಸ್ ಕನಸಿನ ಮನೆ ಇದರ ಮಾಲಕ ಮೋಹನ್ ಕುಮಾರ್ ಅವರ ಭಾವಚಿತ್ರ ತಯಾರಿಸಿ ಬಳ್ಳಾರಿಯ ಅಭಿಯಾನಿ ಗುರುರಾಜ್ ಎಂಬವರು ಬಳ್ಳಾರಿಯಿಂದ ಉಜಿರೆಗೆ ಬಸ್ ಮುಖಾಂತರ ಆಗಮಿಸಿ ಮೋಹನ್ ಕುಮಾರ್ ಅವರನ್ನು ಭೇಟಿ ಮಾಡಿ ಎರಡು ಬೃಹತ್ ಗಾತ್ರದ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದರು.

ಈ ಸಂದರ್ಭ ಮೋಹನ್ ಕುಮಾರ್ ಅವರು ಬಳ್ಳಾರಿಯ ಅಭಿಮಾನಿಗೆ ಧನ್ಯವಾದ ಅರ್ಪಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
error: Content is protected !!