September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

ಬೆಳ್ತಂಗಡಿ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ರಾಜ್ಯ ಸರ್ಕಾರವು ಶಾಲಾ , ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚಿಸಬೇಕೆಂಬ ಆದೇಶಿಸಿದ ಹಿನ್ನಲೆಯಲ್ಲಿ ಕೊಯ್ಯೂರು ಗ್ರಾಮದ ಭೀಮ್ ರಮಾ ತಂಡದ ವತಿಯಿಂದ ಗ್ರಾಮದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಅಳವಡಿಸಬಹುದಾದ ಭಾರತ ಸಂವಿಧಾನದ ಪೀಠಿಕೆಯ ಮುದ್ರಿತ ಪ್ರತಿಯನ್ನು ಇತ್ತೀಚೆಗೆ ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಜಗತ್ತಿನ ಅತ್ಯಂತ ದೊಡ್ದ ಪ್ರಜಾಪ್ರಭುತ್ವ ದೇಶವಾದ ನಮ್ಮ ದೇಶದ ಪವಿತ್ರ ಗ್ರಂಥ ಸಂವಿಧಾನದ ಮಹತ್ವದ ಆಶಯವನ್ನು ಎತ್ತಿ ಹಿಡಿಯುವ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ವಾಚಿಸುವಂತೆ ರಾಜ್ಯ ಸರಕಾರ ಆದೇಶಿದೆ.
ಈ ಸಂದರ್ಭ ಸಂವಿಧಾನದ ಆಶಯ ಹಾಗೂ ಅದರ ಪ್ರಾಮುಖ್ಯತೆ ಜಾಗೃತಗೊಳಿಸುವ ಉದ್ದೇಶದೊಂದಿಗೆ ಸರಕಾರ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ್ದು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಲಿದೆ ಎಂದು ಸಂವಿಧಾನ ಪೀಠಿಕೆ ಹಸ್ತಾಂತರಿಸಿದ ಭೀಮ್ ರಮಾ ತಂಡದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದರು.

ಭೀಮ್ ರಮಾ ತಂಡದ ಪದಾಧಿಕಾರಿಗಳು, ಸದಸ್ಯರು ಗ್ರಾಮದ ಸ.ಹಿ.ಪ್ರಾ. ಶಾಲೆ ಬಜಿಲ, ಸ.ಹಿ.ಪ್ರಾ. ಶಾಲೆ ಆದೂರ್ ಪೇರಾಲ್, ಸ.ಪ್ರೌ.ಶಾಲೆ ಕೊಯ್ಯುರು, ಸ.ಕಿ.ಪ್ರಾ.ಶಾಲೆ ಉಣ್ಣಾಲು, ಸ.ಹಿ.ಪ್ರಾ.ಶಾಲೆ ಕೊಯ್ಯುರು ದೇವಸ್ಥಾನ, ಸ.ಹಿ.ಪ್ರಾ.ಶಾಲೆ ಮಲೆಬೆಟ್ಟು ಶಾಲೆಗಳಿಗೆ ಭೇಟಿ ನೀಡಿ ಸಂವಿಧಾನ ಪೀಠಿಕೆಯ ಮುದ್ರಿತ ಫಲಕವನ್ನು ಕೊಡುಗೆಯಾಗಿ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಕೊಯ್ಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಮೋಹನ್, ಉಪನ್ಯಾಸಕಿ ತೃಪ್ತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ., ಸಹಶಿಕ್ಷಕರಾದ ರಾಮಚಂದ್ರ ದೊಡ್ಡಮನಿ, ದೀಪ್ತಿ ಹೆಗ್ಡೆ , ಗೀತಾ , ಸುಧಾಕರ್, ಭೀಮ್ ರಮಾ ಬಳಗದ ಮಾಜಿ ಅಧ್ಯಕ್ಷ ನಿತೇಶ್ ಕೆ.ವಿ., ಸದಸ್ಯರು, ಕಾಲೇಜು ವಿದ್ಯಾರ್ಥಿ ನಾಯಕ ಡಿ.ವಿ.ರಕ್ಷಿತ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya
error: Content is protected !!