ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಂಡಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ರವಿ ಕುಮಾರ್, ಉಮೇಶ್ ಆಚಾರ್ಯ, ದೀಕ್ಷಿತ್, ನಾರಾಯಣ ಶೆಟ್ಟಿ ಮಂಜುಶ್ರೀನಗರ, ವಿರಾಟ್ ಹಿಂದೂ ಸೇವಾ ಸಂಘದ ಅಧ್ಯಕ್ಷ ಸಚಿನ್ ಮಾಡ, ಕಾರ್ಯದರ್ಶಿ ಗಣೇಶ್ ಗೌಡ, ಗಿರೀಶ್ ರೈ, ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Comment

error: Content is protected !!