April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ ಕೇಶವ ಫಡಕೆ ಮತ್ತು ಶ್ರೀಮತಿ ಉಷಾ ಅವರನ್ನು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸೆ.19 ರಂದು ನಡೆದ ಗಣೇಶೋತ್ಸವದಲ್ಲಿ ಗೌರವಿಸಲಾಯಿತು.


1980-1990 ರ ದಶಕದಲ್ಲಿ ಮಲವಂತಿಗೆ (ದಿಡುಪೆ) ಗ್ರಾಮವು ಮಾಧ್ಯಮಗಳಿಂದ ಕುಗ್ರಾಮ ಎಂದು ಗುರುತಿಸಲ್ಪಟ್ಟ ಅತೀ ಹಿಂದುಳಿದ ಪ್ರದೇಶವಾಗಿತ್ತು ಮತ್ತು ಕುಗ್ರಾಮ” ಎಂಬ ಪದಕ್ಕೆ ಅನ್ವರ್ಥವೇ ಆಗಿತ್ತು ಅಭಿವೃದ್ಧಿ ಎಂಬುವುದು ಮರೀಚಿಕೆ ಆಗಿದ್ದ ಸಮಯದಿಂದ ಗ್ರಾಮದ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳನ್ನು ತನ್ನದೇ ಆದ ದಾರಿಯಲ್ಲಿ ಪ್ರಯತ್ನಗಳನ್ನು ನಡೆಸಿ ತೆರೆಯಮರೆಯಲ್ಲಿ ಹಲವು ಜನೋಪಯೋಗಿ ಕಾರ್ಯಗಳನ್ನು ಊರಿಗೆ ತಂದವರಲ್ಲಿ ಕೇಶವ ಫಡಕೆಯವರು ಒಬ್ಬರಾಗಿದ್ದಾರೆ. ಧಾರ್ಮಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ, ಭಜನಾ ಸಂಘ, ಸಾಹಿತ್ಯ ಸಮ್ಮೇಳನ, ಸಹಕಾರಿ ಸಂಸ್ಥೆಗಳು, ಶಿಕ್ಷಣ ರಂಗದಲ್ಲಿ ಸಕ್ರೀಯ ಸದಸ್ಯರಾಗಿ, ಪ್ರಾಮಾಣಿಕ, ನಿಸ್ವಾರ್ಥ ಮನೋಭಾವದಿಂದ ಇವರು ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವಕರೆಂದು ಗುರುತಿಸಿಕೊಂಡಿರುವ ಕೇಶವ ಫಡಕೆಯವರು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಲ್ಲಿ ಕಳೆದ 37 ವರ್ಷಗಳಿಂದ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿಯೂ ಪಾತ್ರವಹಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!