25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ ಕೇಶವ ಫಡಕೆ ಮತ್ತು ಶ್ರೀಮತಿ ಉಷಾ ಅವರನ್ನು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸೆ.19 ರಂದು ನಡೆದ ಗಣೇಶೋತ್ಸವದಲ್ಲಿ ಗೌರವಿಸಲಾಯಿತು.


1980-1990 ರ ದಶಕದಲ್ಲಿ ಮಲವಂತಿಗೆ (ದಿಡುಪೆ) ಗ್ರಾಮವು ಮಾಧ್ಯಮಗಳಿಂದ ಕುಗ್ರಾಮ ಎಂದು ಗುರುತಿಸಲ್ಪಟ್ಟ ಅತೀ ಹಿಂದುಳಿದ ಪ್ರದೇಶವಾಗಿತ್ತು ಮತ್ತು ಕುಗ್ರಾಮ” ಎಂಬ ಪದಕ್ಕೆ ಅನ್ವರ್ಥವೇ ಆಗಿತ್ತು ಅಭಿವೃದ್ಧಿ ಎಂಬುವುದು ಮರೀಚಿಕೆ ಆಗಿದ್ದ ಸಮಯದಿಂದ ಗ್ರಾಮದ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳನ್ನು ತನ್ನದೇ ಆದ ದಾರಿಯಲ್ಲಿ ಪ್ರಯತ್ನಗಳನ್ನು ನಡೆಸಿ ತೆರೆಯಮರೆಯಲ್ಲಿ ಹಲವು ಜನೋಪಯೋಗಿ ಕಾರ್ಯಗಳನ್ನು ಊರಿಗೆ ತಂದವರಲ್ಲಿ ಕೇಶವ ಫಡಕೆಯವರು ಒಬ್ಬರಾಗಿದ್ದಾರೆ. ಧಾರ್ಮಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ, ಭಜನಾ ಸಂಘ, ಸಾಹಿತ್ಯ ಸಮ್ಮೇಳನ, ಸಹಕಾರಿ ಸಂಸ್ಥೆಗಳು, ಶಿಕ್ಷಣ ರಂಗದಲ್ಲಿ ಸಕ್ರೀಯ ಸದಸ್ಯರಾಗಿ, ಪ್ರಾಮಾಣಿಕ, ನಿಸ್ವಾರ್ಥ ಮನೋಭಾವದಿಂದ ಇವರು ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವಕರೆಂದು ಗುರುತಿಸಿಕೊಂಡಿರುವ ಕೇಶವ ಫಡಕೆಯವರು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಲ್ಲಿ ಕಳೆದ 37 ವರ್ಷಗಳಿಂದ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿಯೂ ಪಾತ್ರವಹಿಸಿದ್ದಾರೆ.

Related posts

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya
error: Content is protected !!