25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

ಮಲಂವತಿಗೆ: ಕಳೆದ ಸುಮಾರು 40 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿ, ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ ಸಮಾಜ ಸೇವಕ ಮಲಂತಿಗೆ ಗ್ರಾಮದ ಸುಭಾಶ್‌ಬಾಗ್ ನಿವಾಸಿ ಕೇಶವ ಫಡಕೆ ಮತ್ತು ಶ್ರೀಮತಿ ಉಷಾ ಅವರನ್ನು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸೆ.19 ರಂದು ನಡೆದ ಗಣೇಶೋತ್ಸವದಲ್ಲಿ ಗೌರವಿಸಲಾಯಿತು.


1980-1990 ರ ದಶಕದಲ್ಲಿ ಮಲವಂತಿಗೆ (ದಿಡುಪೆ) ಗ್ರಾಮವು ಮಾಧ್ಯಮಗಳಿಂದ ಕುಗ್ರಾಮ ಎಂದು ಗುರುತಿಸಲ್ಪಟ್ಟ ಅತೀ ಹಿಂದುಳಿದ ಪ್ರದೇಶವಾಗಿತ್ತು ಮತ್ತು ಕುಗ್ರಾಮ” ಎಂಬ ಪದಕ್ಕೆ ಅನ್ವರ್ಥವೇ ಆಗಿತ್ತು ಅಭಿವೃದ್ಧಿ ಎಂಬುವುದು ಮರೀಚಿಕೆ ಆಗಿದ್ದ ಸಮಯದಿಂದ ಗ್ರಾಮದ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳನ್ನು ತನ್ನದೇ ಆದ ದಾರಿಯಲ್ಲಿ ಪ್ರಯತ್ನಗಳನ್ನು ನಡೆಸಿ ತೆರೆಯಮರೆಯಲ್ಲಿ ಹಲವು ಜನೋಪಯೋಗಿ ಕಾರ್ಯಗಳನ್ನು ಊರಿಗೆ ತಂದವರಲ್ಲಿ ಕೇಶವ ಫಡಕೆಯವರು ಒಬ್ಬರಾಗಿದ್ದಾರೆ. ಧಾರ್ಮಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವ, ಭಜನಾ ಸಂಘ, ಸಾಹಿತ್ಯ ಸಮ್ಮೇಳನ, ಸಹಕಾರಿ ಸಂಸ್ಥೆಗಳು, ಶಿಕ್ಷಣ ರಂಗದಲ್ಲಿ ಸಕ್ರೀಯ ಸದಸ್ಯರಾಗಿ, ಪ್ರಾಮಾಣಿಕ, ನಿಸ್ವಾರ್ಥ ಮನೋಭಾವದಿಂದ ಇವರು ಸೇವೆಯನ್ನು ಮಾಡಿದ್ದಾರೆ. ಸಮಾಜ ಸೇವಕರೆಂದು ಗುರುತಿಸಿಕೊಂಡಿರುವ ಕೇಶವ ಫಡಕೆಯವರು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಲ್ಲಿ ಕಳೆದ 37 ವರ್ಷಗಳಿಂದ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿಯೂ ಪಾತ್ರವಹಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾಮದಲ್ಲಿ ನಿಲ್ಲದ ಕಾಡಾನೆ ದಾಂಧಲೆ: ಬೆಳೆ ನಾಶ-ಮನೆ ಬಳಿ ನಿಲ್ಲಿಸಿದ್ದ ಕಾರು-ಸ್ಕೂಟಿ ಮೇಲೆ ದಾಳಿ-ಜನರಲ್ಲಿ ಹೆಚ್ಚಿದ ಆತಂಕ

Suddi Udaya
error: Content is protected !!