25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಇಂದಬೆಟ್ಟು ಸೈಂಟ್ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ವಹಿಸಿ ಮಾತನಾಡಿ ಸಂಘವು ರೂ. 4.09 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಸಂತ ಗೌಡ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಕೆ. , ನಿರ್ದೇಶಕರಾದ ಲಕ್ಷ್ಮಣ ಗೌಡ, ಉಮೇಶ್, ತನುಜಾ ಶೇಖರ್, ಆನಂದ ಗೌಡ, ರಮೇಶ್, ವಿನಯಚಂದ್ರ, ಶ್ರೀಮತಿ ವಿಜಯ, ರಘನಾಥ, ಸತೀಶ್ ನಾಯ್ಕ, ಶ್ರೀಮತಿ ಭವ್ಯ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಂದೇಶ್ ಕುಮಾರ್ ಎಮ್, ವೃತ್ತಿಪರ ನಿರ್ದೇಶಕರಾದ ಶ್ರೀಮತಿ ಕೆ ಪುಷ್ಪಲತಾ, ಕೇಶವ ಎಂ.ಕೆ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಕೆ ದೇವರಾವ್ ಕಡಿರುದ್ಯಾವರ ಇವರನ್ನು ಸನ್ಮಾನಿಸಲಾಯಿತು.

ಸಿಬ್ಬಂದಿ ರಮಾನಂದ ಸ್ವಾಗತಿಸಿ, ವರದಿ ವಾಚಿಸಿ, ನಿರೂಪಿಸಿದರು. ಸಂಘದ ನೌಕರ ವೃಂದದವರು ಸಹಕರಿಸಿದರು.

Related posts

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya
error: Content is protected !!