23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

ಬೆಳಾಲು: ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು. ಡಾ. ಮಂಜು ಎಚ್ಆರ್, ಧರ್ಮಸ್ಥಳ ಆರೋಗ್ಯ ಕೇಂದ್ರ ಹಾಗೂ ಕುಮಾರಿ ಪ್ರಮೀಳ, ಶಿಕ್ಷಣ ಸಂಯೋಜಕಿ ದಯಳ್ ಬಾಗ್ ಗ್ರಾಮಾಭಿವೃದ್ಧಿ ಬೆಳ್ತಂಗಡಿ ಇವರು ಪೋಷಣ ಅಭಿಯಾನದ ಮಾಹಿತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಮಾಜಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಂತಿ , ಬೆಳಾಲು ಮಾಯ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ಜಾನ್ಸಿ ಭಾಗವಹಿಸಿದರು.


ಈ ಕಾರ್ಯಕ್ರಮದಲ್ಲಿ ಸಂಜೀವಿನಿ ಎಂಬಿಕೆ ಶ್ರೀಮತಿ ಹರಿಣಾಕ್ಷಿ, ಆಶಾ ಕಾರ್ಯಕರ್ತೆರಾದ ಶ್ರೀಮತಿ ಪ್ರೇಮ ಮತ್ತು ಶೀಲಾವತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಶ್ರೀಮತಿ ಸುಜಾತ ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಸಂಜೀವಿನಿ ಸದಸ್ಯರು ದಯಾಳ್ ಬಾಗ್ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಕ್ಕಳಿಗೆ ಬಣ್ಣದ ಪೆನ್ಸಿಲ್ ಹಾಗೂ ಡ್ರಾಯಿಂಗ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಶ್ರೀಮತಿ ಸುಕನ್ಯಾ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಮಕ್ಕಳ ಹೆತ್ತವರು ಮಾಡಿದ ವಿವಿಧ ತಿಂಡಿ ತಿನಸುಗಳ ಪ್ರದರ್ಶನ ನಡೆಯಿತು.

Related posts

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya
error: Content is protected !!