ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

error: Content is protected !!