25.4 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya
error: Content is protected !!