25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya
error: Content is protected !!