23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!