22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya
error: Content is protected !!