ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಇಂದಬೆಟ್ಟು ಸೈಂಟ್ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ವಹಿಸಿ ಮಾತನಾಡಿ ಸಂಘವು ರೂ. 4.09 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಸಂತ ಗೌಡ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಕೆ. , ನಿರ್ದೇಶಕರಾದ ಲಕ್ಷ್ಮಣ ಗೌಡ, ಉಮೇಶ್, ತನುಜಾ ಶೇಖರ್, ಆನಂದ ಗೌಡ, ರಮೇಶ್, ವಿನಯಚಂದ್ರ, ಶ್ರೀಮತಿ ವಿಜಯ, ರಘನಾಥ, ಸತೀಶ್ ನಾಯ್ಕ, ಶ್ರೀಮತಿ ಭವ್ಯ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಂದೇಶ್ ಕುಮಾರ್ ಎಮ್, ವೃತ್ತಿಪರ ನಿರ್ದೇಶಕರಾದ ಶ್ರೀಮತಿ ಕೆ ಪುಷ್ಪಲತಾ, ಕೇಶವ ಎಂ.ಕೆ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಕೆ ದೇವರಾವ್ ಕಡಿರುದ್ಯಾವರ ಇವರನ್ನು ಸನ್ಮಾನಿಸಲಾಯಿತು.

ಸಿಬ್ಬಂದಿ ರಮಾನಂದ ಸ್ವಾಗತಿಸಿ, ವರದಿ ವಾಚಿಸಿ, ನಿರೂಪಿಸಿದರು. ಸಂಘದ ನೌಕರ ವೃಂದದವರು ಸಹಕರಿಸಿದರು.

Leave a Comment

error: Content is protected !!