26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

ಬೆಳಾಲು: ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು. ಡಾ. ಮಂಜು ಎಚ್ಆರ್, ಧರ್ಮಸ್ಥಳ ಆರೋಗ್ಯ ಕೇಂದ್ರ ಹಾಗೂ ಕುಮಾರಿ ಪ್ರಮೀಳ, ಶಿಕ್ಷಣ ಸಂಯೋಜಕಿ ದಯಳ್ ಬಾಗ್ ಗ್ರಾಮಾಭಿವೃದ್ಧಿ ಬೆಳ್ತಂಗಡಿ ಇವರು ಪೋಷಣ ಅಭಿಯಾನದ ಮಾಹಿತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಮಾಜಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಂತಿ , ಬೆಳಾಲು ಮಾಯ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ಜಾನ್ಸಿ ಭಾಗವಹಿಸಿದರು.


ಈ ಕಾರ್ಯಕ್ರಮದಲ್ಲಿ ಸಂಜೀವಿನಿ ಎಂಬಿಕೆ ಶ್ರೀಮತಿ ಹರಿಣಾಕ್ಷಿ, ಆಶಾ ಕಾರ್ಯಕರ್ತೆರಾದ ಶ್ರೀಮತಿ ಪ್ರೇಮ ಮತ್ತು ಶೀಲಾವತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಶ್ರೀಮತಿ ಸುಜಾತ ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಸಂಜೀವಿನಿ ಸದಸ್ಯರು ದಯಾಳ್ ಬಾಗ್ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಕ್ಕಳಿಗೆ ಬಣ್ಣದ ಪೆನ್ಸಿಲ್ ಹಾಗೂ ಡ್ರಾಯಿಂಗ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಶ್ರೀಮತಿ ಸುಕನ್ಯಾ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಮಕ್ಕಳ ಹೆತ್ತವರು ಮಾಡಿದ ವಿವಿಧ ತಿಂಡಿ ತಿನಸುಗಳ ಪ್ರದರ್ಶನ ನಡೆಯಿತು.

Related posts

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya
error: Content is protected !!