September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳ್ತಂಗಡಿ: ವಿದ್ಯೆಯೊಂದಿಗೆ ವಿನಯವೂ ಸೇರಿದಾಗ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ, ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಮತ್ತು ಮಿತ್ರತ್ವ ಬೆಳೆಯಲು ಸಾಧ್ಯವಾಗುತ್ತದೆ. ಸೋಲು ಗೆಲುವಿನ ಕುರಿತು ಯೋಚನೆ ಮಾಡದೆ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕೇವಲ ಪಠ್ಯದ ಜ್ಞಾನವನ್ನು ಮಾತ್ರ ಪಡೆಯುವುದಲ್ಲದೆ, ಪಠ್ಯೇತರ ಜ್ಞಾನವನ್ನು ಗಳಿಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್ ಗೌಡ, ಜಿಲ್ಲಾ ಕ್ರೀಡಾ ಸಂಯೋಜಕರಾದ ಅರುಣ್ ಡಿಸೋಜ, ವಾಣಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್.ಎಂ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಕ್ರೀಡಾ ಸಂಯೋಜಕರಾದ ನಂದಕುಮಾರ್ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!