23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪ್ರಯೋಜನ ಹಾಗೂ ಯುವ ಶಕ್ತಿ ಬಳಕೆಯ ಬಗ್ಗೆ ಮಾತನಾಡಿದರು.

ಅಭ್ಯಾಗತರಾದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ವಯಂ ಸೇವಕ ಧನುಷ್ ಕೆ.ಪಿ. ಅವರು ಯೋಜನೆಯ ಸ್ವಯಂ ಸೇವಕರ ವ್ಯಕ್ತಿತ್ವ ವಿಕಸನದೊಂದಿಗೆ ಜವಾಬ್ಧಾರಿಗಳನ್ನು ಹೇಗೆ ನಿಭಾಯಿಸಲು ಸಾಧ್ಯ ಎಂದು ರಾ. ಸೇ ಯೋಜನೆಯಿಂದ ತಿಳಿಯಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರನ್ನು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ , ರಾಷ್ಟ್ರೀಯ ಸೇವಾ ಯೋಜನೆಯ ಸಲಹಾ ಸಮಿತಿಯ ಸದಸ್ಯರಾದ ದಿವ್ಯಾ ಕುಮಾರಿ , ರಾಜೇಶ್ ಕಲ್ಲಬೆಟ್ಟು , ನಾಗರಾಜ್ ಭಂಡಾರಿ , ರಾ.ಸೇ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಪ್ರಥಮ್ ಸ್ವಾಗತಿಸಿ ನಿರೂಪಿಸಿದರು. ಪಲ್ಲವಿ ಪರಿಚಯಿಸಿದರು. ಘಟಕದ ನಾಯಕಿ ದಕ್ಷಾ ವಂದಿಸಿದರು.

Related posts

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!