July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

ಗೇರುಕಟ್ಟೆ: ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.22 ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾ ಭವನದಲ್ಲಿ ನಡೆಯಿತು.

ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಜನಾರ್ಧನ ಗೌಡ ಕೆ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ರೂ. 8.08 ಲಕ್ಷ ನಿವ್ವಳ ಲಾಭ ಗಳಿಸಿ, ಶೇ. 8 ಡಿವಿಡೆಂಟ್ ಘೋಷಿಸಿದರು..

ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಗುಲಾಬಿ ವಾರ್ಷಿಕ ಖರ್ಚು-ವೆಚ್ಚದ ವರದಿ ಮಂಡಿಸಿದರು

ಈ ಸಂದರ್ಭದಲ್ಲಿ ಸಂಘದ ಅಂತರಿಕ ಲೆಕ್ಕ ಪರಿಶೋಧಕರಾದ ಕೆ.ಎಸ್ ಹರಿಪ್ರಸಾದ್, ಪಶು ವೈಧ್ಯಾಧಿಕಾರಿ ಡಾ.ಗಣಪತಿ, ಸಂಘದ ಉಪಾಧ್ಯಾಕ್ಷ ಸಿರಿಲ್ ಪಿಂಟೊ, ನಿರ್ದೇಶಕರಾದ ಕುಶಲಾವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಹೆಚ್, ನೆವಿಲ್ ಸ್ಟೀವನ್ ಮೋರಾಸ್, ವಸಂತ ನಾಯ್ಕ ಯೋಗಿನಿ, ಗಂಗಯ್ಯ ಗೌಡ, ಮೋಹನದಾಸ ಶೆಟಿ ರೇಖಾ ವೇದಿಕೆಯಲಿ ಉಪಸ್ಥಿತರಿದರು

2022-23ನೇ ಸಾಲಿನಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಕೆ ಮಾಡಿದ ಉರ್ಬನ್ ಮೋರಾಸ್, ವಲೇರಿಯನ್ ಡಿ.ಸೋಜ, ವೀರಪ್ಪ ಪೂಜಾರಿ ಗೌರವಿಸಿದರು. ಡೆಂಟಲ್ ಶಿಕ್ಷಣದಲ್ಲಿ 4 ಮತ್ತು 5 ನೇ ರ್‍ಯಾಂಕ್ ಪಡೆದ ಕುಮಾರಿ ಅನುದೀಕ್ಷಾ ಎಸ್.ಆರ್., ನಿವೃತ್ತ ಸೈನಿಕರಾದ ದಿನೇಶ್ ಗೌಡ ಕಲಾಯಿತೊಟ್ಟು, ಸುಭ್ರಮಣಿ ಐ.ಎಮ್.ಗೇರುಕಟ್ಟೆ, ರಾಜೇಶ್ ಕಾಮತ್ ಹಾಗೂ ಪ್ರಸ್ತುತ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಬೇಬಿ ಗೌಡ ಪೇರಾಜೆ, ವಿಕ್ರಂ ವಂಜಾರೆ, ಪ್ರಮೋದ್ ಗೌಡ ಬರಾಯ, ಸೂರಜ್ ಶೆಟ್ಟಿ ನೆಲ್ಲಿಕಟ್ಟೆ ಇವರ ಪರವಾಗಿ ಪೋಷಕರನ್ನು ವೇದಿಕೆಯಲ್ಲಿ ಸನ್ಮಾನಿಸಿ, ಗೌರವಿಸಿದರು. ಜಿಲ್ಲಾ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಗಳಿಸಿದ ನಾಗವೇಣಿ ಕೆ.ಎಸ್ ರವರನ್ನು ಸನ್ಮಾನಿಸಲಾಯಿತು.

ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ವರ ಸಂಯೋಜನೆ ಮಾಡಿ ಸತೀಶ್ ಭಂಡಾರಿ ಗೇರುಕಟ್ಟೆ ರವರನ್ನು ಗೌರವಿಸಿದರು. ಹಾಲು ಉತ್ಪಾದಕರ ಸಂಘದ ಅಂತರಿಕ ಲೆಕ್ಕ ಪರಿಶೋಧಕರಾದ ಕೆ.ಎಸ್.ಹರಿಪ್ರಸಾದ್ ಗೇರುಕಟ್ಟೆ, ದ.ಕ.ಹಾ.ಉ.ಮ.ಸಂ.ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಕಟ್ಟಡ ನಿರ್ಮಾಣ ಸಮಯದಲ್ಲಿ ಕಚೇರಿಗೆ ಕಟ್ಟಡದ ಸಹಕಾರ ನೀಡಿದ ಮೋಹನ ಗೌಡ ರವರನ್ನು ಗೌರವಿಸಿದರು.

ಸಂಘದ ನಿರ್ದೇಶಕ ರಂಜನ್ ಹೆಚ್ ಸ್ವಾಗತಿಸಿದರು. ಉಮೇಶ್ ಕೇಲ್ಡಡ್ಕ ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕ ನೆವಿಲ್ ಸ್ಟೀವನ್ ಮೋರಾಸ್ ಧನ್ಯವಾದವಿತ್ತರು.

Related posts

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya
error: Content is protected !!