23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!