July 23, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya
error: Content is protected !!