25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
error: Content is protected !!