25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

ಬೆಳಾಲು: ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು. ಡಾ. ಮಂಜು ಎಚ್ಆರ್, ಧರ್ಮಸ್ಥಳ ಆರೋಗ್ಯ ಕೇಂದ್ರ ಹಾಗೂ ಕುಮಾರಿ ಪ್ರಮೀಳ, ಶಿಕ್ಷಣ ಸಂಯೋಜಕಿ ದಯಳ್ ಬಾಗ್ ಗ್ರಾಮಾಭಿವೃದ್ಧಿ ಬೆಳ್ತಂಗಡಿ ಇವರು ಪೋಷಣ ಅಭಿಯಾನದ ಮಾಹಿತಿಯನ್ನು ನೀಡಿದರು.


ಮುಖ್ಯ ಅತಿಥಿಗಳಾಗಿ ಮಾಜಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಂತಿ , ಬೆಳಾಲು ಮಾಯ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ಜಾನ್ಸಿ ಭಾಗವಹಿಸಿದರು.


ಈ ಕಾರ್ಯಕ್ರಮದಲ್ಲಿ ಸಂಜೀವಿನಿ ಎಂಬಿಕೆ ಶ್ರೀಮತಿ ಹರಿಣಾಕ್ಷಿ, ಆಶಾ ಕಾರ್ಯಕರ್ತೆರಾದ ಶ್ರೀಮತಿ ಪ್ರೇಮ ಮತ್ತು ಶೀಲಾವತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಶ್ರೀಮತಿ ಸುಜಾತ ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಸಂಜೀವಿನಿ ಸದಸ್ಯರು ದಯಾಳ್ ಬಾಗ್ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಕ್ಕಳಿಗೆ ಬಣ್ಣದ ಪೆನ್ಸಿಲ್ ಹಾಗೂ ಡ್ರಾಯಿಂಗ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕಮ್ಮ ಕಾರ್ಯಕ್ರಮ ನಿರೂಪಿಸಿ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಶ್ರೀಮತಿ ಸುಕನ್ಯಾ ಸ್ವಾಗತಿಸಿ, ಶ್ರೀಮತಿ ಹರಿಣಾಕ್ಷಿ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಮಕ್ಕಳ ಹೆತ್ತವರು ಮಾಡಿದ ವಿವಿಧ ತಿಂಡಿ ತಿನಸುಗಳ ಪ್ರದರ್ಶನ ನಡೆಯಿತು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya
error: Content is protected !!