ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೆ.24 ರಂದು ಬೆಳಿಗ್ಗೆ 10.00 ಗಂಟೆಗೆ ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಬ್ಯಾಂಕ್ ಆಫ್ ಬರೋಡ ವಿಭಾಗೀಯ ಮುಖ್ಯಸ್ಥರು ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಗಾಯತ್ರಿ ಆರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಜರ್ನಾದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಧನರಾಜ್ , ಉಜಿರೆ ಎಸ್.ಡಿ.ಎಂ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಬೆಳ್ತಂಗಡಿ ವಕೀಲರಾದ ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕರಾದ ಕೆ.ಮೋಹನ್ ಕುಮಾರ್ ಹಾಗೂ ಬಿ.ರಾಜೇಶ್ ಪೈ ತಿಳಿಸಿದ್ದಾರೆ.















