25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!