23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya
error: Content is protected !!