July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!