25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!