September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
error: Content is protected !!