25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya
error: Content is protected !!