23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!