September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಮಕ್ಕಳು ಚಿಕ್ಕಂದಿನಲ್ಲಿ ತಮ್ಮ ಉಡುಪಿನ ಬಗ್ಗೆ ಜಾಗ್ರತೆ ಮತ್ತು ಕಾಳಜಿಯನ್ನು ವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇದು ಅವರಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ. ಅದಕ್ಕಾಗಿಯೇ ಬಿಳಿ ಮತ್ತು ನೀಲಿ ಬಣ್ಣದ ಸಮವಸ್ತ್ರವನ್ನು ನೀಡಿರುವುದು. ಒದಗಿಸಿದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು, ಒಳ್ಳೆಯ ಅಂಕಗಳನ್ನು ಪಡೆದುಕೊಂಡು, ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಶಾಲೆಗೆ ಕೃತಜ್ಞರಾಗಿದ್ದುಕೊಂಡು ಸಂಸ್ಥೆಯ ಉನ್ನತಿಗೆ ಸಹಕರಿಸಿ . ಹಾಗೂ ಪ್ರತಿವರ್ಷ ಶಾಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹಳಷ್ಟು ಕೊಡುಗೆಗಳನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಸದಾ ಸ್ಮರಿಸುತ್ತೇವೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ನುಡಿದರು.

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ಎಮ್.ಸಿ.ಎಫ್ ಸಂಸ್ಥೆ ಕೊಡ ಮಾಡಿದ 103 ವಿದ್ಯಾರ್ಥಿಗಳ ಸಮವಸ್ತ್ರವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್ ರವರು ವಿತರಿಸಿದರು.

ನಿಕಟ ಪೂರ್ವ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರಾದ ಸಂತೋಷ್ ಮರ್ದೊಟ್ಟು ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ರೂಪ ಕುಮಾರಿಯವರು ಸ್ವಾಗತಿಸಿದ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಆಶಾ ರವರು ನಿರೂಪಿಸಿದರು. ಗೌರವ ಶಿಕ್ಷಕಿ ಮಾಲತಿ ವಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!