September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya
error: Content is protected !!