23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!