24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!