April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya
error: Content is protected !!