25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya
error: Content is protected !!