22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya
error: Content is protected !!