September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ


ಧರ್ಮಸ್ಥಳ: ಶಿರಸಿಯಿಂದ ಸೆ.25 ರಂದು ಧರ್ಮಸ್ಥಳಕ್ಕೆ ಸೈಕಲ್ ಯಾನದಲ್ಲಿ ಬಂದ ಎಂಟು ಜನರ ತಂಡ ಧರ್ಮಾಧಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಿರಸಿಯ ಡಾ. ವಿಕ್ರಂ ಹೆಗ್ಡೆ, ರಾಹುಲ್ ಹೆಗ್ಡೆ, ಯೋಗೀಶ್ ಭಟ್, ಗುರುರಾಜ ಹೆಗ್ಡೆ, ದೀಪಕ್ ಕಾಮತ್, ಗೌರವ್ ಪ್ರಭು, ವಿನಾಯಕ ಪ್ರಭು ಮತ್ತು ನಾಗರಾಜ ಭಟ್ ಭಾನುವಾರ ಶಿರಸಿಯಿಂದ ಸೈಕಲ್ ಮೂಲಕ ಹೊರಟು 300 ಕಿ.ಮೀ. ಕ್ರಮಿಸಿ ಸೋಮವಾರ 10 ಗಂಟೆಗೆ ಧರ್ಮಸ್ಥಳ ತಲುಪಿದ್ದಾರೆ. ದೇವರ ದರ್ಶನ ಮಾಡಿ, ಅನ್ನಪೂರ್ಣಛತ್ರದಲ್ಲಿ ಪ್ರಸಾದ ಸ್ವೀಕರಿಸಿ ಶಿರಸಿಗೆ ಪ್ರಯಾಣ ಮುಂದುವರಿಸಿದರು.


ಶಿರಸಿ ಸೈಕಲ್ ಕ್ಲಬ್: ಸಮಾನ ಮನಸ್ಕರೆಲ್ಲ ಸೇರಿ ಆರೋಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದಕ್ಕಾಗಿ ಶಿರಸಿ ಸೈಕಲ್ ಕ್ಲಬ್ ಆರಂಭಿಸಿರುವುದಾಗಿ ಸದಸ್ಯರು ತಿಳಿಸಿದ್ದಾರೆ, ಅಲ್ಲದೆ ಆಸಕ್ತರಿಗೆ ನಡಿಗೆ, ಓಟ ಮತ್ತು ಸೈಕಲ್ ಯಾನದ ಬಗ್ಯೆ ಉಚಿತ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಿ ಆರೋಗ್ಯ ಮತ್ತು ಪರಿಸರ ರಕ್ಷಣೆಗೆ ಅರಿವು, ಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya
error: Content is protected !!