24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ಬಗ್ಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ ಎಲ್ಲರೂ ಈ ತರಬೇತಿಯ ಸದುಪಯೋಗ ಪಡೆದು ಜೇನು ಕೃಷಿ ಮಾಡುವಂತೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಮಹಾವೀರ್ ಮತ್ತು ಅಶ್ವಿನ್ ರವರು ಜೇನು ಕೃಷಿ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರಾದ ಹೇಮಚಂದ್ರ ರವರು ಯೋಜನೆಗಳ ಬಗ್ಗೆ ತಿಳಿಸಿದರು. ಜೇನು ಕೃಷಿಯಲ್ಲಿ ಪ್ರಗತಿಪರ ಕೃಷಿಕರಾದ ಆಲಡ್ಕ ಶ್ಯಾಮಸುಂದರ್ ಭಟ್ ಮಾಹಿತಿ ನೀಡಿ ಅವರ ತೋಟದಲ್ಲಿ ಜೇನು ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಪ್ರಗತಿಪರ ಕೃಷಿಕರಾದ ಪ್ರಕಾಶ್ ಜೋಷಿ ಸುಲ್ಕೇರಿ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ, ನಿರ್ದೇಶಕರಾದ ಲಿಂಗಪ್ಪ ಎಮ್.ಕೆ, ನಾರಾವಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಮತಿ ಮೀನಾ, ಇಕೋ ಫ್ರೆಶ್ ಎಂಟರ್ ಪ್ರೈಸಸ್ ಮಾಲಕರಾದ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು.

ಡಬ್ಲ್ಯೂಸಿ ಎಸ್ ಸಂಸ್ಥೆಯ ಅಧಿಕಾರಿ, ಸಮಾಜ ಸೇವಕರಾದ ರಾಮಚಂದ್ರ ಭಟ್ ಕುಕ್ಕುಜೆ, ಡಬ್ಲ್ಯೂಸಿ ಎಸ್ ಸಂಸ್ಥೆಯಿಂದ ಈ ವರ್ಷ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದು ಮಾದರಿ ಜೀವನ ನಡೆಸುವಂತೆ ಕರೆ ನೀಡಿ, ಸ್ವಾಗತಿಸಿ, ಧನ್ಯವಾದವಿತ್ತರು.

ಕುತ್ಲೂರು ಸ.ಉ.ಪ್ರಾ.ಶಾಲೆಯ ಮಕ್ಕಳ ಪ್ರಾರ್ಥಿಸಿದರು. ಸುಮಾರು 70 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya
error: Content is protected !!