September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ಬಗ್ಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ ಎಲ್ಲರೂ ಈ ತರಬೇತಿಯ ಸದುಪಯೋಗ ಪಡೆದು ಜೇನು ಕೃಷಿ ಮಾಡುವಂತೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಮಹಾವೀರ್ ಮತ್ತು ಅಶ್ವಿನ್ ರವರು ಜೇನು ಕೃಷಿ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರಾದ ಹೇಮಚಂದ್ರ ರವರು ಯೋಜನೆಗಳ ಬಗ್ಗೆ ತಿಳಿಸಿದರು. ಜೇನು ಕೃಷಿಯಲ್ಲಿ ಪ್ರಗತಿಪರ ಕೃಷಿಕರಾದ ಆಲಡ್ಕ ಶ್ಯಾಮಸುಂದರ್ ಭಟ್ ಮಾಹಿತಿ ನೀಡಿ ಅವರ ತೋಟದಲ್ಲಿ ಜೇನು ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಪ್ರಗತಿಪರ ಕೃಷಿಕರಾದ ಪ್ರಕಾಶ್ ಜೋಷಿ ಸುಲ್ಕೇರಿ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ, ನಿರ್ದೇಶಕರಾದ ಲಿಂಗಪ್ಪ ಎಮ್.ಕೆ, ನಾರಾವಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಮತಿ ಮೀನಾ, ಇಕೋ ಫ್ರೆಶ್ ಎಂಟರ್ ಪ್ರೈಸಸ್ ಮಾಲಕರಾದ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು.

ಡಬ್ಲ್ಯೂಸಿ ಎಸ್ ಸಂಸ್ಥೆಯ ಅಧಿಕಾರಿ, ಸಮಾಜ ಸೇವಕರಾದ ರಾಮಚಂದ್ರ ಭಟ್ ಕುಕ್ಕುಜೆ, ಡಬ್ಲ್ಯೂಸಿ ಎಸ್ ಸಂಸ್ಥೆಯಿಂದ ಈ ವರ್ಷ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದು ಮಾದರಿ ಜೀವನ ನಡೆಸುವಂತೆ ಕರೆ ನೀಡಿ, ಸ್ವಾಗತಿಸಿ, ಧನ್ಯವಾದವಿತ್ತರು.

ಕುತ್ಲೂರು ಸ.ಉ.ಪ್ರಾ.ಶಾಲೆಯ ಮಕ್ಕಳ ಪ್ರಾರ್ಥಿಸಿದರು. ಸುಮಾರು 70 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!