23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ಬಗ್ಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ ಎಲ್ಲರೂ ಈ ತರಬೇತಿಯ ಸದುಪಯೋಗ ಪಡೆದು ಜೇನು ಕೃಷಿ ಮಾಡುವಂತೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಮಹಾವೀರ್ ಮತ್ತು ಅಶ್ವಿನ್ ರವರು ಜೇನು ಕೃಷಿ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರಾದ ಹೇಮಚಂದ್ರ ರವರು ಯೋಜನೆಗಳ ಬಗ್ಗೆ ತಿಳಿಸಿದರು. ಜೇನು ಕೃಷಿಯಲ್ಲಿ ಪ್ರಗತಿಪರ ಕೃಷಿಕರಾದ ಆಲಡ್ಕ ಶ್ಯಾಮಸುಂದರ್ ಭಟ್ ಮಾಹಿತಿ ನೀಡಿ ಅವರ ತೋಟದಲ್ಲಿ ಜೇನು ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಪ್ರಗತಿಪರ ಕೃಷಿಕರಾದ ಪ್ರಕಾಶ್ ಜೋಷಿ ಸುಲ್ಕೇರಿ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ, ನಿರ್ದೇಶಕರಾದ ಲಿಂಗಪ್ಪ ಎಮ್.ಕೆ, ನಾರಾವಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಮತಿ ಮೀನಾ, ಇಕೋ ಫ್ರೆಶ್ ಎಂಟರ್ ಪ್ರೈಸಸ್ ಮಾಲಕರಾದ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು.

ಡಬ್ಲ್ಯೂಸಿ ಎಸ್ ಸಂಸ್ಥೆಯ ಅಧಿಕಾರಿ, ಸಮಾಜ ಸೇವಕರಾದ ರಾಮಚಂದ್ರ ಭಟ್ ಕುಕ್ಕುಜೆ, ಡಬ್ಲ್ಯೂಸಿ ಎಸ್ ಸಂಸ್ಥೆಯಿಂದ ಈ ವರ್ಷ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದು ಮಾದರಿ ಜೀವನ ನಡೆಸುವಂತೆ ಕರೆ ನೀಡಿ, ಸ್ವಾಗತಿಸಿ, ಧನ್ಯವಾದವಿತ್ತರು.

ಕುತ್ಲೂರು ಸ.ಉ.ಪ್ರಾ.ಶಾಲೆಯ ಮಕ್ಕಳ ಪ್ರಾರ್ಥಿಸಿದರು. ಸುಮಾರು 70 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!