26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಮಕ್ಕಳು ಚಿಕ್ಕಂದಿನಲ್ಲಿ ತಮ್ಮ ಉಡುಪಿನ ಬಗ್ಗೆ ಜಾಗ್ರತೆ ಮತ್ತು ಕಾಳಜಿಯನ್ನು ವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇದು ಅವರಲ್ಲಿ ಶಿಸ್ತು ಮತ್ತು ಸಮಾನತೆಯ ಭಾವವನ್ನು ಬೆಳೆಸುತ್ತದೆ. ಅದಕ್ಕಾಗಿಯೇ ಬಿಳಿ ಮತ್ತು ನೀಲಿ ಬಣ್ಣದ ಸಮವಸ್ತ್ರವನ್ನು ನೀಡಿರುವುದು. ಒದಗಿಸಿದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು, ಒಳ್ಳೆಯ ಅಂಕಗಳನ್ನು ಪಡೆದುಕೊಂಡು, ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಶಾಲೆಗೆ ಕೃತಜ್ಞರಾಗಿದ್ದುಕೊಂಡು ಸಂಸ್ಥೆಯ ಉನ್ನತಿಗೆ ಸಹಕರಿಸಿ . ಹಾಗೂ ಪ್ರತಿವರ್ಷ ಶಾಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹಳಷ್ಟು ಕೊಡುಗೆಗಳನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಸದಾ ಸ್ಮರಿಸುತ್ತೇವೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ನುಡಿದರು.

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ಎಮ್.ಸಿ.ಎಫ್ ಸಂಸ್ಥೆ ಕೊಡ ಮಾಡಿದ 103 ವಿದ್ಯಾರ್ಥಿಗಳ ಸಮವಸ್ತ್ರವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್ ರವರು ವಿತರಿಸಿದರು.

ನಿಕಟ ಪೂರ್ವ ಗ್ರಾಮ್ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರಾದ ಸಂತೋಷ್ ಮರ್ದೊಟ್ಟು ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ರೂಪ ಕುಮಾರಿಯವರು ಸ್ವಾಗತಿಸಿದ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಆಶಾ ರವರು ನಿರೂಪಿಸಿದರು. ಗೌರವ ಶಿಕ್ಷಕಿ ಮಾಲತಿ ವಂದಿಸಿದರು.

Related posts

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya
error: Content is protected !!