26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya
error: Content is protected !!