22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!