38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

ಬಂದಾರು : ಮೈಸೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸತತ 9ನೇ ಬಾರಿಗೆ ವಾಲಿಬಾಲ್ ಕ್ರೀಡಾಕಾಶಿಯಿಂದ ಆಯ್ಕೆಯಾದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಫೈನಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬೆಳಗಾಂ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಇವರನ್ನು ಉಜಿರೆ – ಬೆಳ್ತಂಗಡಿ- ಗುರುವಾಯನಕೆರೆ- ಕುಪ್ಪೆಟ್ಟಿ – ಪದ್ಮುಂಜ – ಮೈರೋಳ್ತಡ್ಕ – ಬಂದಾರು ಮಾರ್ಗವಾಗಿ ನಾಸಿಕ್ ಬ್ಯಾಂಡ್ ಮೂಲಕ ವೈಭವಪೂರ್ಣ ಮೆರವಣಿಗೆಯ ಮೂಲಕ ಸೆ.24 ರಂದು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ ಕೋಟ್ಯಾನ್, ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ, ಬಂದಾರು ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನಿನ್ನಿಕಲ್ಲು , ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಯುವ ಮೋರ್ಚಾ ಸದಸ್ಯರಾದ ಗಿರೀಶ್ ಗೌಡ ಬಿ.ಕೆ ಬಂದಾರು, ಬಂದಾರು ಶಾಲೆಯ ಎಸ್.ಡಿ,ಎಮ್.ಸಿ ಅಧ್ಯಕ್ಷ ಉಮೇಶ್ ಗೌಡ ಪೊಯ್ಯೊಳೆ, ಜಗದೀಶ ಗೌಡ ಕೊಂಬೇಡಿ ಉಪಸ್ಥಿತರಿದ್ದರು.

Related posts

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya
error: Content is protected !!