29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya
error: Content is protected !!