26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ಶಿಶಿಲ : ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಎ.ಎಸ್ ರವರು ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 10 ಡಿವಿಡೆಂಟ್ ಘೋಷಿಸಿದರು.

ಸಭೆಯಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ| ಯಾದವ ಮತ್ತು ಮಾಜಿ ಅಧ್ಯಕ್ಷ ಯೋಗೀಶ್ ದಾಮ್ಲೆ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಹಾಲು ಒಕ್ಕೂಟ ಪಶುವೈದ್ಯಾಧಿಕಾರಿ ಡಾ. ಜಿತೇಂದ್ರ , ಬೆಳ್ತಂಗಡಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಬಿ. ಕಾಮತ್, ನಿರ್ದೇಶಕರುಗಳಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ.ಸುಂದರ, ಡಿ.ಸುಂದರ, ಶ್ರೀಮತಿ ಭವಾನಿ ಜಿ., ಶ್ರೀಮತಿ ಸೇಸಮ್ಮ ಕೆ., ಶ್ರೀಮತಿ ಸರೋಜ ಕೆ, ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಕೆ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮೀಶ ಬಿ. ನಿರೂಪಿಸಿದರು. ಸಿಬ್ಬಂದಿ ಶೋಧನ್ ಡಿ. ಧನ್ಯವಾದವಿತ್ತರು.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya
error: Content is protected !!