September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್


ಬೆಳ್ತಂಗಡಿ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.24 ರಂದು ಕಾರ್ಕಳ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಭವನದಲ್ಲಿ ಸಹಕಾರಿಯ ಅಧ್ಯಕ್ಷರಾದ ನೇಮಿರಾಜ ಆರಿಗ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು.


ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಅವರು ಮಾತನಾಡಿ, ಸಂಘವು ವರದಿ ಸಾಲಿನಲ್ಲಿ ರೂ. 130 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ 17,92, 882 ಲಾಭಗಳಿಸಿದ್ದು ಸಂಘದ ಸದಸ್ಯರಿಗೆ ಶೇಕಡಾ 14 ಡಿವಿಡೆಂಟ್ ಘೋಷಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ತಮ್ಮ ಸಭಾಭತ್ಯೆಯನ್ನು 16 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನಾಗಿ ನೀಡಿದರು ಹಾಗೂ ಮರಣ ಹೊಂದಿದ 3 ಸಾಲಗಾರರ ಸಾಲಗಳನ್ನು ಭರಿಸಿ ಆ ಕುಟುಂಬಗಳಿಗೆ ಸಾಲ ಋಣ ಮುಕ್ತ ಪತ್ರ ನೀಡಲಾಯಿತು.


ನಿರ್ದೇಶಕ ಶಶಿಕಿರಣ್ ಜೈನ್ ವರದಿ ವಾಚಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶಶಿಕಿರಣ್ ಜೈನ್ ಹಾಗೂ ನಿರ್ದೇಶಕರುಗಳಾದ ಪದ್ಮರಾಜ್ ಅತಿಕಾರಿ, ಮೊಹಮ್ಮದ್ ಗೌಸ್,ಶಮಂತ್ ಕುಮಾರ್ ಜೈನ್, ನಿರಂಜನ್ ಜೈನ್, ಎಸ್ ಪಿ ವರ್ಮ, ಪ್ರಶಾಂತ್ ಕುಮಾರ್, ಶ್ರೀಮತಿ ಪದ್ಮಲತಾ, ಶ್ರೀಮತಿ ಸುಜಾತ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ಉಪಸ್ಥಿತರಿದ್ದರು.

ಸಿಬ್ಬಂದಿ ಕು| ಅನುಷಾ ಇವರ ಪ್ರಾರ್ಥನೆ ಬಳಿಕ ಎಸ್.ಪಿ ವರ್ಮ ಸ್ವಾಗತಿಸಿದರು. ವಿಶುಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿ, ವಸೂಲಾತಿ ಅಧಿಕಾರಿ ರಾಕೇಶ್ ಕುಮಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!